ಇಂದು (19-04-2020) ಶಾಸಕರಾದ ಶ್ರೀ ಹೆಚ್.ಹಾಲಪ್ಪ ನವರು
ರಿಪ್ಪನಪೇಟೆ ಗ್ರಾ.ಪಂ ವ್ಯಾಪ್ತಿಯ ವಿಕಲಾಂಗ ಚೇತನರಿಗೆ ಪಡಿತರ ಕಿಟ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಅಯೋಜಕರಾದ ತಾ.ಪಂ ಅಧ್ಯಕ್ಷರಾದ ವೀರೇಶ್ ಆಲವಳ್ಳಿ, ಜಿ.ಪಂ ಸದಸ್ಯರಾದ ಸುರೇಶ್ ಸ್ವಾಮಿರಾವ್ ರವರಿಗೆ ಮತ್ತು ಈ ಕಾರ್ಯಕ್ಕೆ ಸಹಕರಿಸಿದ ದಾನಿಗಳಿಗೆ,ಪಕ್ಷದ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದರು.
ನಂತರ ರಿಪ್ಪನಪೇಟೆ ಸ್ನೇಹ ಬಳಗದ ವತಿಯಿಂದ ಪ್ರತಿದಿನ ಕೊರೋನ ವಾರಿಯರ್ಸ್ ಗಳಿಗೆ (ಕೊರೊನ ಕಾಯಿಲೆ ನಿರ್ಮೂಲನೆಗೆ ಶ್ರಮಿಸುತ್ತಿರುವ ಅಧಿಕಾರಿಗಳು) ಭೋಜನದ ವ್ಯವಸ್ಥೆ ಮಾಡಿದ್ದ ಸ್ಥಳಕ್ಕೆ ಭೇಟಿ ನೀಡಿ, ಭೋಜನ ಸ್ವೀಕರಿಸಿ ಸ್ವಚ್ಛತೆ ಕಾಪಾಡುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಆರಗ ಜ್ಞಾನೇಂದ್ರ ರವರು, ಗ್ರಾ.ಪಂ ಅಧ್ಯಕ್ಷರಾದ ಶಾರದಮ್ಮ,ಉಪಾಧ್ಯಕ್ಷರಾದ ಕೃಶ್ನೋಜಿ, ತಾ.ಬಿಜೆಪಿ ಅಧ್ಯಕ್ಷರಾದ ಗಣಪತಿ ಬಿಳಗೋಡು, ಸ್ಥಳೀಯ ಚುನಾಯಿತ ಪ್ರತಿನಿಧಿಗಳು, ಪಕ್ಷದ ವಿವಿಧ ಹಂತದ ಮುಖಂಡರು,ಅಧಿಕಾರಿಗಳು ಉಪಸ್ಥಿತರಿದ್ದರು.

Goutham K S,Sagara
