ಪ್ರಧಾನಿ ನರೇಂದ್ರ ಮೋದಿಯವರು ಚುನಾವಣಾ ಪೂರ್ವ ಪ್ರಚಾರಕ್ಕಾಗಿ ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ. ಮೋದಿಯವರೊಂದಿಗೆ ಕೇಂದ್ರೀಯ ಮಂತ್ರಿಗಳು ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ.
ತಮಿಳುನಾಡಿನಲ್ಲಿ ಭಾರತೀಯ ಜನತಾ ಪಕ್ಷವು ಭದ್ರವಾದ ನೆಲೆ ಕಂಡುಕೊಳ್ಳಲು ಪ್ರಯತ್ನಿಸುತ್ತಿದೆ. ತಮಿಳುನಾಡಿಗಾಗಿ ಕೇಂದ್ರ ಸರ್ಕಾರದ ಕೊಡುಗೆಗಳ ಬಗ್ಗೆ ಮೋದಿ ಮತ್ತು ಮಂತ್ರಿಗಳು ಸಾರ್ವಜನಿಕ ಸಭೆಗಳಲ್ಲಿ ತಮಿಳುನಾಡಿನ ಜನತೆಗೆ ತಿಳಿಯಪಡಿಸಲಿದ್ದಾರೆ.
ಪ್ರಧಾನಿ ಮೋದಿಯವರು ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಅಮಿತ್ ಶಾ ಅವರೊಂದಗೆ ಪ್ರಚಾರ ಆರಂಭಿಸಲಿದ್ದಾರೆ. ಕೇಂದ್ರೀಯ ಮಂತ್ರಿಗಳಾದ ನಿತಿನ್ ಗಡ್ಕರಿ, ರವಿಶಂಕರ್ ಪ್ರಸಾದ್, ನಿರ್ಮಲಾ ಸೀತಾರಾಮನ್ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಮಿಳುನಾಡಿನಲ್ಲಿ ಭಾರತೀಯ ಜನತಾ ಪಕ್ಷದ ಈ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ.
೨೧-ಎಕರೆ ಖಾಸಗಿ ಮೈದಾನದಲ್ಲಿ ಸಾರ್ವಜನಿಕ ಸಭೆ ನಡೆಯಲಿದೆ. ಪಕ್ಷದ ಪ್ರಚಾರವನ್ನು ಪೆಬ್ರುವರಿ ೧೦ ಮತ್ತು ೧೯ರಂದು ತಿರುಪುರ್, ಚೆನ್ನೈ ಮತ್ತು ಕನ್ಯಾಕುಮಾರಿ ನಗರಗಳಲ್ಲಿ ನಡೆಸಲಾಗುವುದು.
ತಮಿಳುನಾಡಿನ ಅಭಿವೃದ್ಧಿಗಾಗಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಏನೆಲ್ಲಾ ಕೊಡುಗೆಗಳನ್ನು ನೀಡಿದೆ ಎಂಬುದನ್ನು ಭಾರತೀಯ ಜನತಾ ಪಕ್ಷದ ವತಿಯಿಂದ ತಮಿಳುನಾಡಿನ ಜನತೆಗೆ ಸವಿವರವಾಗಿ ತಿಳಿಯಪಡಿಸಲಾಗುತ್ತದೆ. ಇದರ ಮೂಲಕ ಭಾರತೀಯ ಜನತಾ ಪಕ್ಷದ ಬಗ್ಗೆ ತಮಿಳುನಾಡಿನ ಜನತೆಯ ಸಕಾರಾತ್ಮಕ ಪ್ರತಿಕ್ರಿಯೆ ಸಂಪಾದಿಸಿಕೊಳ್ಳಲು ಲೆಕ್ಕಾಚಾರ ಹಾಕುತ್ತಿದೆ.
